" ಮಹಾಲಯ ಪಕ್ಷಾರಂಭ "
( ದಿನಾಂಕ : 25.09.18 - 08.10.18 ವರೆಗೆ ಪಕ್ಷಮಾಸ )
" ಶ್ರಾದ್ಧದ ಮಹತ್ವ - ಒಂದು ಚಿಂತನೆ "
" ಶ್ರಾದ್ಧ " ಯೆಂದರೆ...
" ಶ್ರದ್ಧಯಾ ಕ್ರೀಯತೇ ಕರ್ಮ ಇತಿ ಶ್ರಾದ್ಧಮ್ " - ಶ್ರದ್ಧೆಯಿಂದ ಆಚರಿಸುವ ಕಾರ್ಯವೇ " ಶ್ರಾದ್ಧ " ಎಂದು ಕರೆಸಿಕೊಳ್ಳುತ್ತದೆ. ಅತ್ಯಂತ ನಿಷ್ಠೆಯಿಂದ ಪಿಂಡ ಪ್ರದಾನ ಮಾಡಿ ಪಿತೃ ದೇವತೆಗಳ ಅಂತರ್ಯಾಮಿಯಾದ ಶ್ರೀ ಜನಾರ್ದನ ರೂಪಿ ಭಗವಂತನನ್ನು ತೃಪ್ತಿ ಪಡಿಸಬೇಕು. ಇದರಿಂದ ತನ್ನ ಪಿತೃಗಳಿಗೆ ಸದ್ಗತಿಯು ದೊರೆಯಲಿದೆಯೆಂದು ಪ್ರಾರ್ಥಿಸಬೇಕು.
ಕರ್ಮಭೂಮಿ ಯೆನಿಸಿದ ಈ ಭರತ ಖಂಡದ ಸನಾತನ ಧರ್ಮಗಳಲ್ಲಿ " ಶ್ರಾದ್ಧ " ಕರ್ಮವು ಮುಖ್ಯವಾಗಿದೆ. ಇದು ಅತ್ಯಂತ ಶ್ರೇಯಸ್ಕರವಾದ ಕರ್ಮವಾಗಿದೆ. ಇದನ್ನು " ಪಿತೃ ಯಜ್ಞ " ಎಂದು ಕರೆಯುತ್ತಾರೆ.
" ಬ್ರಹ್ಮಾಂಡ ಪುರಾಣ " ದಲ್ಲಿ...
Book Pandit for puja in Bangalore
ನಮ್ಮ ಜನ್ಮಕ್ಕೆ ಕಾರಣರಾಗಿ, ನಮ್ಮನ್ನು ಹೆತ್ತು - ಹೊತ್ತು - ಸಾಕಿ - ಸಲುಹಿ ನಮ್ಮ ಉದ್ಧಾರಕ್ಕೆ ಶ್ರಮಿಸಿ, ನಮ್ಮನ್ನಗಲಿ ಹೋದ ತಂದೆ - ತಾಯಿ - ಹಿರಿಯರು ಮುಂತಾದವರನ್ನು ಸ್ಮರಿಸಿ, ಅವರನ್ನು ಕುರಿತು ಶ್ರದ್ಧೆಯಿಂದ ಅನ್ನ - ಜಲಾದಿಗಳನ್ನು ಕೊಡುವ ಪಿತೃ ಕಾರ್ಯಕ್ಕೆ " ಶ್ರಾದ್ಧ " ಎಂದು ಹೆಸರು.
" ಶ್ರಾದ್ಧ ಕಲ್ಪಲತಾ " ದಲ್ಲಿ....
ಪಿತೃಗಳನ್ನುದ್ಧೇಶಿಸಿ ಶ್ರದ್ಧೆಯಿಂದ ಕೊಡಲ್ಪಟ್ಟ ದ್ರವ್ಯವನ್ನು ಬ್ರಾಹ್ಮಣರು ಸ್ವೀಕರಿಸುವುದಕ್ಕೆ " ಶ್ರಾದ್ಧ " ಎಂದು ಹೆಸರು.
ಒಟ್ಟಿನಲ್ಲಿ ಶ್ರದ್ಧೆಯಿಂದ ತನಗೆ ಪ್ರಿಯವಾದ ಭೋಜ್ಯವನ್ನು ತನ್ನ ಪಿತೃಗಳನ್ನುದ್ಧೇಶಿಸಿ ಕೊಡುವ " ಪಿಂಡ ಪ್ರದಾನ " ಕ್ರಿಯೆಗೆ " ಶ್ರಾದ್ಧ " ಎಂದು ಹೆಸರು.
ಇಲ್ಲಿ ಕೆಲವರು ಪ್ರಶ್ನೆ ಮಾಡುವುದುಂಟು...
ನಮ್ಮನ್ನಗಲಿ ಹೋದ ಪಿತೃಗಳಿಗೆ ನಾವು ಕೊಡುವ ಜಲಾಂಜಲಿ - ಪಿಂಡ ಪ್ರಧಾನದಿಂದ ತೃಪ್ತಿಯಾಗುವುದು ಹೇಗೆ? ಅವರಿಗೆ ನಾವು ಕೊಟ್ಟಿದ್ದು ತಲುಪುವುದು ಹೇಗೆ?
ಇದಕ್ಕೆ ಉತ್ತರ ಹೀಗಿದೆ...
ನಾವು ಕೊಟ್ಟ ಅನ್ನವನ್ನು ಅಂದರೆ...
ಅದರ ಸಾರ ಭಾಗವನ್ನು ವಸು - ರುದ್ರ - ಆದಿತ್ಯ ತದಂತರ್ಗತ ಭಾರತೀ ರಾಮಣ ಮುಖ್ಯಪ್ರಾಣಾಂತರ್ಗತ ಪ್ರದ್ಯುಮ್ನ - ಸಂಕರ್ಷಣ - ವಾಸುದೇವ ರೂಪಿ ಭಗವಂತನು ಸ್ವೀಕರಿಸಿ ಅದನ್ನು ನಮ್ಮ ಪಿತೃಗಳು ಯಾವ ಯೋನಿಯಲ್ಲಿ ಎಲ್ಲಿ ಇರುವರೋ ಅಲ್ಲಿ ಅವರಿಗೆ ಆಹಾರ ರೂಪವಾಗಿ ಸೂಕ್ತ ರೀತಿಯಲ್ಲಿ ಕೊಟ್ಟು ಸಂತೋಷ ಪಡಿಸುತ್ತಾನೆ.
ಶ್ರಾದ್ಧ ಕರ್ತೃವಿನ ತಂದೆಯು / ಪಿತೃಗಳು ದೇವತ್ವವನ್ನು ಹೊಂದಿದ್ದರೆ ಆ ಅನ್ನವು ಅಮೃತವಾಗಿ, ಪಶುವಾಗಿದ್ದರೆ ಹುಲ್ಲಾಗಿ, ಸರ್ಪವಾಗಿದ್ದರೆ ವಾಯು ರೂಪವಾಗಿ, ಹದ್ದು ಮೊದಲಾದವಾಗಿದ್ದರೆ ಮಾಂಸವಾಗಿ, ಮನುಷ್ಯನಾಗಿದ್ದರೆ ಯೋಗ್ಯ ಅನ್ನವಾಗಿ ಅವರಿಗೆ ತಲುಪುತ್ತದೆ.
ಪಿತೃಗಳ ( ತಂದೆ - ತಾಯಿ - ಹಿರಿಯರು ) ತೃಪ್ತಿಗಾಗಿ ಶ್ರಾದ್ಧ ಕರ್ಮವನ್ನು ಮಾಡಲೇಬೇಕು ಎಂದು " ಕೂರ್ಮ ಪುರಾಣ " ದಲ್ಲಿ...
ಮಾನವರಿಗೆ ತಮ್ಮ ಪಿತೃಗಳ ಶಾಸ್ತ್ರೋಕ್ತವಾದ ಶ್ರಾದ್ಧ ಕರ್ಮಕ್ಕಿಂತ ಶ್ರೇಯಸ್ಕರವಾದ ಕಾರ್ಯವು ಯಾವುದೂ ಇಲ್ಲ. ಆದುದರಿಂದ ವಿವೇಕಿಗಳೂ; ಜ್ಞಾನಿಗಳೂ ಸರ್ವ ಪ್ರಯತ್ನದಿಂದ ಶ್ರಾದ್ಧವನ್ನು ಮಾಡಬೇಕು.
" ಯಮ ಸ್ಮೃತಿ "
ಯಾವ ಬ್ರಾಹ್ಮಣನು ಎಲ್ಲಾ ಇಷ್ಟಾರ್ಥವನ್ನು ಕೊಡುವವರಾದ ಪಿತೃಗಳನ್ನೂ; ದೇವತೆಗಳನ್ನೂ ಪೂಜಿಸುವರೋ ಅವರು ಎಲ್ಲಾ ಚೇತನಾಚೇತನಾತ್ಮಕವಾದ ಪ್ರಪಂಚಕ್ಕೆ ನಿಯಾಮಕನಾದ ಶ್ರೀ ಮಹಾವಿಷ್ಣುವನ್ನೇ ಪೂಜಿಸುತ್ತಾರೆ!!
ಶ್ರಾದ್ಧ ಕರ್ಮವನ್ನು ಮಾಡದಿದ್ದರೆ ಏನಾಗುತ್ತದೆ? ಎಂದು ಕೇಳುವವರಿಗೆ..
" ಹಾರಿತ ಸ್ಮೃತಿ " ಯು ಹೀಗೆ ಉತ್ತರಿಸುತ್ತದೆ...
ಯಾವ ಮನುಷ್ಯರು ಪಿತೃಗಳೂ ಅಥವಾ ತಂದೆ - ತಾಯಿಗಳ ದೇಹವನ್ನು ಸುಟ್ಟು ಭಸ್ಮ ಮಾಡಿದ ಮೇಲೆ ಅವರಿಗೆ ಹೊಟ್ಟೆ ಇಲ್ಲ ಎಂಬ ಭಾವನೆಯಿಂದ ಪಿತೃಗಳ ಶ್ರಾದ್ಧಾದಿಗಳನ್ನ
ು ಮಾಡುವುದಿಲ್ಲವೋ ಅಂಥವರ ಪಿತೃಗಳು ಸಿಟ್ಟಾಗಿ ನಾಸ್ತಿಕರ ರಕ್ತವನ್ನು ಕುಡಿಯುತ್ತಾರೆ.
ಇನ್ನು ಶ್ರಾದ್ಧವನ್ನು ಮಾಡುವವರು ನ್ಯಾಯದಿಂದ ಹಣದಿಂದಲೇ ಮಾಡಬೇಕೆಂದು " ಮಾರ್ಕಂಡೇಯ ಪುರಾಣ " ಈ ಕೆಳಗಿನಂತೆ ಖಚಿತ ಪಡಿಸಿದೆ.
ಮಾನವರು ಅನ್ಯಾಯ - ಅಧರ್ಮದಿಂದ ಹಣವನ್ನು ಗಳಿಸಿ ಅದರಿಂದ ಶ್ರಾದ್ಧ ಮಾಡಿದರೆ ಆ ಶ್ರಾದ್ಧದಿಂದ ಚಾಂಡಾಲ - ಪುಲಸ್ಕ ( ಬ್ರಾಹ್ಮಣನಿಗೆ ಕ್ಷತ್ರೀಯ ಜಾತಿಯಲ್ಲಿ ಹುಟ್ಟಿದ ಮಿಶ್ರ ಜಾತಿಯವ ) ಮುಂತಾದ ಪಾಪಿಗಳಿಗೆ ತೃಪ್ತಿಯಾಗುವುದೇ ಹೊರತು ಪಿತೃಗಳಿಗೆ ತೃಪ್ತಿಯಾಗುವುದೇ ಇಲ್ಲ!!
***
ಈ ಪವಿತ್ರವಾದ ಪಿತೃ ಯಜ್ಞದಲ್ಲಿ ಶ್ರೀ ಜನಾರ್ದನ ರೂಪಿಯಾದ ಶ್ರೀ ಪರಮಾತ್ಮನನ್ನೇ " ಶ್ರಾದ್ಧಾ ಸ್ವಾಮಿ " ಎಂದು ಭಾವಿಸಿಬೇಕು.
ಶ್ರಾದ್ಧದಲ್ಲಿ ಬಳಸುವ ಎಳ್ಳು - ದರ್ಭೆ ಮೊದಲಾದ ಪದಾರ್ಥಗಳಲ್ಲಿ ಶ್ರೀ ಜನಾರ್ದನನು ಒಂದೊಂದು ರೂಪದಿಂದ ನೆಲೆಸುವನು.
ವಿಶ್ವೇ ದೇವತೆಗಳ ಅಂತರ್ಯಾಮಿಯಾಗಿ 3555 ರೂಪಗಳಿಂದ ಶ್ರಾದ್ಧ ಕರ್ಮಕ್ಕೆ ಯಾವ ವಿಘ್ನಗಳು ಬರದಂತೆ ಶ್ರೀ ಜನಾರ್ದನನು ಶ್ರಾದ್ಧ ಕರ್ಮವನ್ನು ರಕ್ಷಿಸುವನು.
ಶ್ರೀ ಜನಾರ್ದನನ ಹೆಸರೇ ಇದನ್ನು ಹೇಳುತ್ತದೆ...
ಜ = 3
ನಾ = 5
ರ್ದ = 5
ನ = 5
ಶ್ರಾದ್ಧ ಕಾಲದಲ್ಲಿ ಪಠಿಸಬೇಕಾದವುಗಳು...
೧. ಶ್ರೀ ಪದ್ಮ ಪುರಾಣಾಂತರ್ಗತ ಔರ್ಧ್ವ ದೇಹಿಕ ಶ್ರೀ ರಾಮ ಸ್ತೋತ್ರ
೨. ಕಾಠಕೋಪನಿಷತ್
೩. ಶ್ರೀ ವಿಜಯವಿಠ್ಠಲ ವಿರಚಿತ " ಪೈತೃಕ ಸುಳಾದಿ "
೪. ಶ್ರೀ ಜಗನ್ನಾಥದಾಸ ಕೃತ " ಪಿತೃ ಗಣ ಸಂಧಿ "
ಹೀಗೆ ಶ್ರೀ ಜನಾರ್ದನನ ರೂಪಗಳು.
ನರಕೋದ್ಧಾರ ಇದರಿಂದ ಸತ್ಯ ಪಿತೃಗಳಿಗೆ ।
ನರಕಾತೀತ ನಮ್ಮ ವಿಜಯವಿಠ್ಠಲ ಸುಳಿವಾ ।।
Get more information : http://www.onlinepurohiths.com/
( ದಿನಾಂಕ : 25.09.18 - 08.10.18 ವರೆಗೆ ಪಕ್ಷಮಾಸ )
" ಶ್ರಾದ್ಧದ ಮಹತ್ವ - ಒಂದು ಚಿಂತನೆ "
" ಶ್ರಾದ್ಧ " ಯೆಂದರೆ...
" ಶ್ರದ್ಧಯಾ ಕ್ರೀಯತೇ ಕರ್ಮ ಇತಿ ಶ್ರಾದ್ಧಮ್ " - ಶ್ರದ್ಧೆಯಿಂದ ಆಚರಿಸುವ ಕಾರ್ಯವೇ " ಶ್ರಾದ್ಧ " ಎಂದು ಕರೆಸಿಕೊಳ್ಳುತ್ತದೆ. ಅತ್ಯಂತ ನಿಷ್ಠೆಯಿಂದ ಪಿಂಡ ಪ್ರದಾನ ಮಾಡಿ ಪಿತೃ ದೇವತೆಗಳ ಅಂತರ್ಯಾಮಿಯಾದ ಶ್ರೀ ಜನಾರ್ದನ ರೂಪಿ ಭಗವಂತನನ್ನು ತೃಪ್ತಿ ಪಡಿಸಬೇಕು. ಇದರಿಂದ ತನ್ನ ಪಿತೃಗಳಿಗೆ ಸದ್ಗತಿಯು ದೊರೆಯಲಿದೆಯೆಂದು ಪ್ರಾರ್ಥಿಸಬೇಕು.
ಕರ್ಮಭೂಮಿ ಯೆನಿಸಿದ ಈ ಭರತ ಖಂಡದ ಸನಾತನ ಧರ್ಮಗಳಲ್ಲಿ " ಶ್ರಾದ್ಧ " ಕರ್ಮವು ಮುಖ್ಯವಾಗಿದೆ. ಇದು ಅತ್ಯಂತ ಶ್ರೇಯಸ್ಕರವಾದ ಕರ್ಮವಾಗಿದೆ. ಇದನ್ನು " ಪಿತೃ ಯಜ್ಞ " ಎಂದು ಕರೆಯುತ್ತಾರೆ.
" ಬ್ರಹ್ಮಾಂಡ ಪುರಾಣ " ದಲ್ಲಿ...
Book Pandit for puja in Bangalore
ನಮ್ಮ ಜನ್ಮಕ್ಕೆ ಕಾರಣರಾಗಿ, ನಮ್ಮನ್ನು ಹೆತ್ತು - ಹೊತ್ತು - ಸಾಕಿ - ಸಲುಹಿ ನಮ್ಮ ಉದ್ಧಾರಕ್ಕೆ ಶ್ರಮಿಸಿ, ನಮ್ಮನ್ನಗಲಿ ಹೋದ ತಂದೆ - ತಾಯಿ - ಹಿರಿಯರು ಮುಂತಾದವರನ್ನು ಸ್ಮರಿಸಿ, ಅವರನ್ನು ಕುರಿತು ಶ್ರದ್ಧೆಯಿಂದ ಅನ್ನ - ಜಲಾದಿಗಳನ್ನು ಕೊಡುವ ಪಿತೃ ಕಾರ್ಯಕ್ಕೆ " ಶ್ರಾದ್ಧ " ಎಂದು ಹೆಸರು.
" ಶ್ರಾದ್ಧ ಕಲ್ಪಲತಾ " ದಲ್ಲಿ....
ಪಿತೃಗಳನ್ನುದ್ಧೇಶಿಸಿ ಶ್ರದ್ಧೆಯಿಂದ ಕೊಡಲ್ಪಟ್ಟ ದ್ರವ್ಯವನ್ನು ಬ್ರಾಹ್ಮಣರು ಸ್ವೀಕರಿಸುವುದಕ್ಕೆ " ಶ್ರಾದ್ಧ " ಎಂದು ಹೆಸರು.
ಒಟ್ಟಿನಲ್ಲಿ ಶ್ರದ್ಧೆಯಿಂದ ತನಗೆ ಪ್ರಿಯವಾದ ಭೋಜ್ಯವನ್ನು ತನ್ನ ಪಿತೃಗಳನ್ನುದ್ಧೇಶಿಸಿ ಕೊಡುವ " ಪಿಂಡ ಪ್ರದಾನ " ಕ್ರಿಯೆಗೆ " ಶ್ರಾದ್ಧ " ಎಂದು ಹೆಸರು.
ಇಲ್ಲಿ ಕೆಲವರು ಪ್ರಶ್ನೆ ಮಾಡುವುದುಂಟು...
ನಮ್ಮನ್ನಗಲಿ ಹೋದ ಪಿತೃಗಳಿಗೆ ನಾವು ಕೊಡುವ ಜಲಾಂಜಲಿ - ಪಿಂಡ ಪ್ರಧಾನದಿಂದ ತೃಪ್ತಿಯಾಗುವುದು ಹೇಗೆ? ಅವರಿಗೆ ನಾವು ಕೊಟ್ಟಿದ್ದು ತಲುಪುವುದು ಹೇಗೆ?
ಇದಕ್ಕೆ ಉತ್ತರ ಹೀಗಿದೆ...
ನಾವು ಕೊಟ್ಟ ಅನ್ನವನ್ನು ಅಂದರೆ...
ಅದರ ಸಾರ ಭಾಗವನ್ನು ವಸು - ರುದ್ರ - ಆದಿತ್ಯ ತದಂತರ್ಗತ ಭಾರತೀ ರಾಮಣ ಮುಖ್ಯಪ್ರಾಣಾಂತರ್ಗತ ಪ್ರದ್ಯುಮ್ನ - ಸಂಕರ್ಷಣ - ವಾಸುದೇವ ರೂಪಿ ಭಗವಂತನು ಸ್ವೀಕರಿಸಿ ಅದನ್ನು ನಮ್ಮ ಪಿತೃಗಳು ಯಾವ ಯೋನಿಯಲ್ಲಿ ಎಲ್ಲಿ ಇರುವರೋ ಅಲ್ಲಿ ಅವರಿಗೆ ಆಹಾರ ರೂಪವಾಗಿ ಸೂಕ್ತ ರೀತಿಯಲ್ಲಿ ಕೊಟ್ಟು ಸಂತೋಷ ಪಡಿಸುತ್ತಾನೆ.
ಶ್ರಾದ್ಧ ಕರ್ತೃವಿನ ತಂದೆಯು / ಪಿತೃಗಳು ದೇವತ್ವವನ್ನು ಹೊಂದಿದ್ದರೆ ಆ ಅನ್ನವು ಅಮೃತವಾಗಿ, ಪಶುವಾಗಿದ್ದರೆ ಹುಲ್ಲಾಗಿ, ಸರ್ಪವಾಗಿದ್ದರೆ ವಾಯು ರೂಪವಾಗಿ, ಹದ್ದು ಮೊದಲಾದವಾಗಿದ್ದರೆ ಮಾಂಸವಾಗಿ, ಮನುಷ್ಯನಾಗಿದ್ದರೆ ಯೋಗ್ಯ ಅನ್ನವಾಗಿ ಅವರಿಗೆ ತಲುಪುತ್ತದೆ.
ಪಿತೃಗಳ ( ತಂದೆ - ತಾಯಿ - ಹಿರಿಯರು ) ತೃಪ್ತಿಗಾಗಿ ಶ್ರಾದ್ಧ ಕರ್ಮವನ್ನು ಮಾಡಲೇಬೇಕು ಎಂದು " ಕೂರ್ಮ ಪುರಾಣ " ದಲ್ಲಿ...
ಮಾನವರಿಗೆ ತಮ್ಮ ಪಿತೃಗಳ ಶಾಸ್ತ್ರೋಕ್ತವಾದ ಶ್ರಾದ್ಧ ಕರ್ಮಕ್ಕಿಂತ ಶ್ರೇಯಸ್ಕರವಾದ ಕಾರ್ಯವು ಯಾವುದೂ ಇಲ್ಲ. ಆದುದರಿಂದ ವಿವೇಕಿಗಳೂ; ಜ್ಞಾನಿಗಳೂ ಸರ್ವ ಪ್ರಯತ್ನದಿಂದ ಶ್ರಾದ್ಧವನ್ನು ಮಾಡಬೇಕು.
" ಯಮ ಸ್ಮೃತಿ "
ಯಾವ ಬ್ರಾಹ್ಮಣನು ಎಲ್ಲಾ ಇಷ್ಟಾರ್ಥವನ್ನು ಕೊಡುವವರಾದ ಪಿತೃಗಳನ್ನೂ; ದೇವತೆಗಳನ್ನೂ ಪೂಜಿಸುವರೋ ಅವರು ಎಲ್ಲಾ ಚೇತನಾಚೇತನಾತ್ಮಕವಾದ ಪ್ರಪಂಚಕ್ಕೆ ನಿಯಾಮಕನಾದ ಶ್ರೀ ಮಹಾವಿಷ್ಣುವನ್ನೇ ಪೂಜಿಸುತ್ತಾರೆ!!
ಶ್ರಾದ್ಧ ಕರ್ಮವನ್ನು ಮಾಡದಿದ್ದರೆ ಏನಾಗುತ್ತದೆ? ಎಂದು ಕೇಳುವವರಿಗೆ..
" ಹಾರಿತ ಸ್ಮೃತಿ " ಯು ಹೀಗೆ ಉತ್ತರಿಸುತ್ತದೆ...
ಯಾವ ಮನುಷ್ಯರು ಪಿತೃಗಳೂ ಅಥವಾ ತಂದೆ - ತಾಯಿಗಳ ದೇಹವನ್ನು ಸುಟ್ಟು ಭಸ್ಮ ಮಾಡಿದ ಮೇಲೆ ಅವರಿಗೆ ಹೊಟ್ಟೆ ಇಲ್ಲ ಎಂಬ ಭಾವನೆಯಿಂದ ಪಿತೃಗಳ ಶ್ರಾದ್ಧಾದಿಗಳನ್ನ
ು ಮಾಡುವುದಿಲ್ಲವೋ ಅಂಥವರ ಪಿತೃಗಳು ಸಿಟ್ಟಾಗಿ ನಾಸ್ತಿಕರ ರಕ್ತವನ್ನು ಕುಡಿಯುತ್ತಾರೆ.
ಇನ್ನು ಶ್ರಾದ್ಧವನ್ನು ಮಾಡುವವರು ನ್ಯಾಯದಿಂದ ಹಣದಿಂದಲೇ ಮಾಡಬೇಕೆಂದು " ಮಾರ್ಕಂಡೇಯ ಪುರಾಣ " ಈ ಕೆಳಗಿನಂತೆ ಖಚಿತ ಪಡಿಸಿದೆ.
ಮಾನವರು ಅನ್ಯಾಯ - ಅಧರ್ಮದಿಂದ ಹಣವನ್ನು ಗಳಿಸಿ ಅದರಿಂದ ಶ್ರಾದ್ಧ ಮಾಡಿದರೆ ಆ ಶ್ರಾದ್ಧದಿಂದ ಚಾಂಡಾಲ - ಪುಲಸ್ಕ ( ಬ್ರಾಹ್ಮಣನಿಗೆ ಕ್ಷತ್ರೀಯ ಜಾತಿಯಲ್ಲಿ ಹುಟ್ಟಿದ ಮಿಶ್ರ ಜಾತಿಯವ ) ಮುಂತಾದ ಪಾಪಿಗಳಿಗೆ ತೃಪ್ತಿಯಾಗುವುದೇ ಹೊರತು ಪಿತೃಗಳಿಗೆ ತೃಪ್ತಿಯಾಗುವುದೇ ಇಲ್ಲ!!
***
ಈ ಪವಿತ್ರವಾದ ಪಿತೃ ಯಜ್ಞದಲ್ಲಿ ಶ್ರೀ ಜನಾರ್ದನ ರೂಪಿಯಾದ ಶ್ರೀ ಪರಮಾತ್ಮನನ್ನೇ " ಶ್ರಾದ್ಧಾ ಸ್ವಾಮಿ " ಎಂದು ಭಾವಿಸಿಬೇಕು.
ಶ್ರಾದ್ಧದಲ್ಲಿ ಬಳಸುವ ಎಳ್ಳು - ದರ್ಭೆ ಮೊದಲಾದ ಪದಾರ್ಥಗಳಲ್ಲಿ ಶ್ರೀ ಜನಾರ್ದನನು ಒಂದೊಂದು ರೂಪದಿಂದ ನೆಲೆಸುವನು.
ವಿಶ್ವೇ ದೇವತೆಗಳ ಅಂತರ್ಯಾಮಿಯಾಗಿ 3555 ರೂಪಗಳಿಂದ ಶ್ರಾದ್ಧ ಕರ್ಮಕ್ಕೆ ಯಾವ ವಿಘ್ನಗಳು ಬರದಂತೆ ಶ್ರೀ ಜನಾರ್ದನನು ಶ್ರಾದ್ಧ ಕರ್ಮವನ್ನು ರಕ್ಷಿಸುವನು.
ಶ್ರೀ ಜನಾರ್ದನನ ಹೆಸರೇ ಇದನ್ನು ಹೇಳುತ್ತದೆ...
ಜ = 3
ನಾ = 5
ರ್ದ = 5
ನ = 5
ಶ್ರಾದ್ಧ ಕಾಲದಲ್ಲಿ ಪಠಿಸಬೇಕಾದವುಗಳು...
೧. ಶ್ರೀ ಪದ್ಮ ಪುರಾಣಾಂತರ್ಗತ ಔರ್ಧ್ವ ದೇಹಿಕ ಶ್ರೀ ರಾಮ ಸ್ತೋತ್ರ
೨. ಕಾಠಕೋಪನಿಷತ್
೩. ಶ್ರೀ ವಿಜಯವಿಠ್ಠಲ ವಿರಚಿತ " ಪೈತೃಕ ಸುಳಾದಿ "
೪. ಶ್ರೀ ಜಗನ್ನಾಥದಾಸ ಕೃತ " ಪಿತೃ ಗಣ ಸಂಧಿ "
ಹೀಗೆ ಶ್ರೀ ಜನಾರ್ದನನ ರೂಪಗಳು.
ನರಕೋದ್ಧಾರ ಇದರಿಂದ ಸತ್ಯ ಪಿತೃಗಳಿಗೆ ।
ನರಕಾತೀತ ನಮ್ಮ ವಿಜಯವಿಠ್ಠಲ ಸುಳಿವಾ ।।
Get more information : http://www.onlinepurohiths.com/
No comments:
Post a Comment